KALPATHARU KRANTHI

ಅರಣ್ಯ ಇಲಾಖೆ ಯಡವಟ್ಟು, ಅಕಸ್ಮಿಕ ಅಗ್ನಿ ಅವಘಡಕ್ಕೆ ಬಲಿಯಾದ ಚಿರತೆ,ಅರಣ್ಯ ಇಲಾಖೆ ವಿರುದ್ದ ಸಾರ್ವಜನಿಕರ ಆಕ್ರೋಶ

Spread the love

ತಿಪಟೂರು ತಾಲ್ಲೋಕಿನ ಕಿಬ್ಬನಹಳ್ಳಿ ಹೋಬಳಿ ಮದ್ಲೇಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆಯ ಯಡವಟ್ಟಿನಿಂದ ವನ್ಯಜೀವಿ ಚಿರತೆ ಬಲಿಯಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ,


ತಿಪಟೂರು ತಾಲ್ಲೋಕಿನ ಕಿಬ್ಬನಹಳ್ಳಿ ಹೋಬಳಿ ಮದ್ಲೇಹಳ್ಳಿ ಚಿರತೆ ಹಾವಳಿ ಹೆಚ್ಚಾದ ಹಿನ್ನೆಲೆ ಅರಣ್ಯ ಇಲಾಖೆ ಮದ್ಲೇಹಳ್ಳಿ ಗ್ರಾಮದ ಸರ್ವೇನಂಬರ್ 10ರಲ್ಲಿ ನಾರಾಯಣಪ್ಪ ಬಿನ್ ಶಂಕರಪ್ಪ ಎಂಬುವವರ ಜಮೀನಿನಲ್ಲಿ ಚಿರತೆ ಸೆರೆಗೆ ಬೋನ್ ಇಡಲಾಗಿತ್ತು,ಅರಣ್ಯ ಇಲಾಖೆ ಇಟ್ಟಿದ ಬೋನಿಗೆ ಚಿರತೆ ಸೇರೆಯಾಗಿದೆ,ಆದರೆ ಈ ಪ್ರದೇಶದಲ್ಲಿ ಆಕಸ್ಮಿಕ ಅಗ್ನಿ ಅವಘಡ ಉಂಟಾಗಿ ಬೋನಿನಲ್ಲಿ ಇಟ್ಟಿದ ಚಿರತೆ ಹೊರಹೋಗಲಾಗದೆ ಬೆಂಕಿ ಕೆನ್ನಾಲಿಗೆಯಿಗೆ ಬಲಿಯಾಗಿದ್ದು ಹುಸಿರುಕಟ್ಟಿ ಸಾವನ್ನಪ್ಪಿದೆ,ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು.ಹಾಗೂ ಕಿಬ್ಬನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,ಕೆ.ಬಿ ಕ್ರಾಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,

ಚಿರತೆ ಮರಣೋತ್ತರ ಪರೀಕ್ಷೆ ನಂತರ ಚಿರತೆ ಕಳೆಬರ, ವಿಲೇವಾರಿ ಮಾಡಲಾಗಿದ್ದು, ಅರಣ್ಯ ಇಲಾಖೆ ಕ್ರಮಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ,ಅರಣ್ಯ ಇಲಾಖೆ ಬೋನ್ ಇಟ್ಟಿದೆ ಆದರೆ ಬೋನಿನಲ್ಲಿ ಚಿರತೆ ಬಿದ್ದಿರುವ ಬಗ್ಗೆ ಮಾಹಿತಿ ಕಲೆಹಾಕಲು ವಿಫಲವಾದ ಹಿನ್ನೆಲೆ ಚಿರತೆ ಸಾವು ಸಂಭವಿಸಿದೆ ಎಂದು ಸಾರ್ವಜನಿಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವರದಿ :ಮಂಜುನಾಥ್ ಹಾಲ್ಕುರಿಕೆ

Exit mobile version