ತಿಪಟೂರು: ನಗರದ ಕೆ.ಎಲ್.ಎ ಸ್ಕೂಲ್ ಆಫ್ ಲಾ ಕಾಲೇಜು ಮತ್ತು ಸುನಂದ ಕಣ್ಣಿನ ಆಸ್ಪತ್ರೆ ಹಾಗೂ ಅಧ್ವಿನ್ ಪ್ಯಾರಾ ಮೆಡಿಕಲ್ ಕಾಲೇಜಿನ ಸಹಯೋಗದಲ್ಲಿ ವಿಶ್ವ ಆರೋಗ್ಯ ದಿನದ ಅಂಗವಾಗಿ ಉಚಿತ ಕಣ್ಣಿನ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿತ್ತು ಸದರಿ ಕಾಲೇಜಿನ ವಿದ್ಯಾರ್ಥಿಗಳು ಉಚಿತ ಕಣ್ಣಿನ ತಪಾಸಣೆಗೆ ಮಾಡಲಾಗಿತ್ತು ಈ ಶಿಬಿರದ ಮೂಲಕ ವಿದ್ಯಾರ್ಥಿಗಳು ತಮ್ಮ ಕಣ್ಣುಗಳ ಆರೋಗ್ಯವನ್ನು ಪರೀಕ್ಷಿಸಿಕೊಂಡರು.ಸದರಿ ಶಿಬಿರದಲ್ಲಿ ಕೆ ಎಲ್ ಎ ಸ್ಕೂಲ್ ಆಫ್ ಲಾ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಪ್ರೊ. ವಿನೀತ ಪಿ ಕೆ ಸಹಾಯಕ ಪ್ರಾಧ್ಯಾಪಕರಾದ ಶ್ರೀ ಪ್ರಸನ್ನ ಕುಮಾರ್ ಸಹಾಯಕ ಪ್ರಾಧ್ಯಾಪಕರಾದ ಶ್ರೀ ಎ ಆರ್ ಪುನೀತ್ ಕುಮಾರ್ ಉಪಸಿತರಿದ್ದರು ಹಾಗೂ ವಿದ್ಯಾರ್ಥಿಗಳು ಎಂದಿನಂತೆ ಸದರಿ ಶಿಬಿರದಲ್ಲಿ ಪಾಲ್ಗೊಂಡಿದ್ದರು.
ವರದಿ: ಸಂತೋಷ್ ಓಬಳ. ಗುಬ್ಬಿ