KALPATHARU KRANTHI

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ತಾಲ್ಲೂಕಿನ ಹೊಗನಘಟ್ಟ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಜೀರ್ಣೋದ್ದಾರಕ್ಕೆ 1 ಲಕ್ಷ ಡಿಡಿ ವಿತರಣೆ

Spread the love

ತಿಪಟೂರು ತಾಲೂಕಿನ ರಂಗಾಪುರ ವಲಯದ ಹೊಗನಘಟ್ಟ ಗ್ರಾಮದ ಶ್ರೀ ರೇಣುಕಾಯಲ್ಲಮ್ಮದೇವಿ ದೇವಸ್ಥಾನದ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಪೂಜ್ಯ ಡಾ|ಡಿ .ವೀರೇದ್ರಹೆಗ್ಗಡೆಯವರು ಮಂಜೂರುಗೊಳಿಸಿದ ರೂ 1ಲಕ್ಷದ ಡಿಡಿ ಯನ್ನು ತಾಲ್ಲೂಕು ಯೋಜನಾಧಿಕಾರಿ ಕೆ.ಉದಯ್ ವಿತರಿಸಿ ಶುಭ ಹಾರೈಸಿದರು.ಈ ಸಂಧರ್ಭದಲ್ಲಿ ತಾಲ್ಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ಪ್ರಕಾಶ್,ಗ್ರಾಮ ಪಂಚಾಯತ್ ಸದಸ್ಯರಾದ ಯೋಗಾನಂದ್,ದೇವಸ್ಥಾನ ಕಮಿಟಿ ಅಧ್ಯಕ್ಷರಾದ ಬಸವರಾಜು,ಯೋಜನೆಯ ತಾಲ್ಲೂಕು ಕೃಷಿ ಅಧಿಕಾರಿ ಪ್ರಮೋದ್ ಕುಮಾರ್,ಮೇಲ್ವಿಚಾರಕ ವಿನೋದ್,ದೇವಸ್ಥಾನ ಕಮಿಟಿ ಸದಸ್ಯರುಗಳು,ಸೇವಾಪ್ರತಿನಿಧಿ ರೂಪ,ಧರ್ಮಸ್ಥಳ ಸಂಘದ ಪಾಲುದಾರಬಂದುಗಳು ಹಾಗೂ ಹೊಗನಘಟ್ಟ ಗ್ರಾಮಸ್ಥರು ಉಪಸ್ಥಿತರಿದ್ದರು

.ವರದಿ:ಮಂಜುನಾಥ್ ಹಾಲ್ಕುರಿಕೆ

Exit mobile version