Year: 2025

ಗುಬ್ಬಿ: ಗ್ರಾಮ ಆಡಳಿತ ಅಧಿಕಾರಿಗಳು ವಿವಿಧ ಬೇಡಿಕೆಗಳನ್ನು ರಾಜ್ಯ ಸರ್ಕಾರದಿಂದ ಪಡೆಯಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಎರಡನೇ ಬಾರಿ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರವನ್ನು ಕೈಗೊಂಡು ಅಂತೆಯೇ ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗ ಮುಷ್ಕರವನ್ನು ನಡೆಸಲಾಗುತ್ತಿದೆ. ಗುಬ್ಬಿ ತಾಲ್ಲೂಕು ಗ್ರಾಮ ಲೆಕ್ಕಾಧಿಕಾರಿಗಳವರ ಅಧ್ಯಕ್ಷೆ ಸುಮತಿ ಮಾತನಾಡಿ ಈ ಹಿಂದೆ ನಮ್ಮ ಗ್ರಾಮ ಲೆಕ್ಕಾಧಿಕಾರಿಗಳು 24 ಬೇಡಿಗಳನ್ನು ಇಟ್ಟು ಮುಷ್ಕರವನ್ನು ನಡೆಸಿದ್ದೆವು ಆದರೆ ರಾಜ್ಯ ಸರ್ಕಾರ ಮಾತ್ರ ನಮ್ಮ ಬೇಡಿಕೆ ಈಡೇರಿಸುವಲ್ಲಿ ವಿಫಲವಾಗಿದೆ ಕೇವಲ ನಾಮಕಾವಸ್ಥೆಗೆ ಎರಡನ್ನು ಮಾತ್ರ ಈಡೇರಿಸಿದ್ದಾರೆ. ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮೊಬೈಲ್ ಆಪ್ ಗಳಿಂದ ಕಾರ್ಯನಿರ್ವಹಿಸಲು ನಮಗೆ ನೀಡಿದ್ದಾರೆ ಆದರೆ ನಿರ್ದಿಷ್ಟ ಕಾಲಾವಕಾಶವನ್ನು ನೀಡುತ್ತಿಲ್ಲ ಬದಲಾಗಿ ತುರ್ತಾಗಿ ಮಾಡಲು ಒತ್ತಡವನ್ನು ಹೇರಲಾಗುತ್ತಿದೆ ಇದರಿಂದ ನಾವು ತಪ್ಪು ಮಾಹಿತಿ ನೀಡುವ ಸಾಧ್ಯತೆ ಇರುತ್ತದೆ ಎಂದರು. ಅಲ್ಲದೆ ನಮ್ಮ ಗ್ರಾಮ ಲೆಕ್ಕಾಧಿಕಾರಿಗಳಿಗೆ ಪ್ರತ್ಯೇಕ ಕಚೇರಿ ವ್ಯವಸ್ಥೆ ಇಲ್ಲದ ಪರಿಣಾಮ ನಾವು ಬಾಡಿಗೆ ಕಟ್ಟಡದಲ್ಲಿ ಕಚೇರಿ ನಡೆಸಿ ರೈತರಿಗೆ ಲಭ್ಯವಾಗುವ ದುಸ್ಥಿತಿ ನಿರ್ಮಾಣವಾಗಿದೆ ಇದರಿಂದ ನಮಗೆ ಆರ್ಥಿಕವಾಗಿ ಹೊರೆಯಾಗಿದೆ ಎಂದರು. ತಾಂತ್ರಿಕ ಸಾಧನಗಳನ್ನು ಮತ್ತಷ್ಟು ನಮಗೆ ನೀಡುವುದರಿಂದ ಸಾರ್ವಜನಿಕರಿಗೆ ಹಾಗೂ ನಮಗೆ ಅರ್ಜಿ ವಿಲೇವಾರಿ ಮಾಡಲು ಸುಧಾರಿಸಬಹುದಾಗಿದೆ ಹಾಗೂ ನಮಗೆ ಹಲವಾರು ವರ್ಷಗಳಿಂದ ವರ್ಗಾವಣೆಗಳು ಆಗುತ್ತಿಲ್ಲ ಇದರಿಂದ ನಮ್ಮ ಕುಟುಂಬದವರಿಂದ ದೂರ ಇರುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಮತ್ತು ನಮಗೆ ಮುಂಬಡ್ತಿ ಕೂಡ ನೀಡಲಾಗುತ್ತಿಲ್ಲ ,ಇವುಗಳಿಂದ ಬೇಸತ್ತು ಎರಡನೇ ಬಾರಿ ರಾಜ್ಯಾದ್ಯಂತ ಮುಷ್ಕರವನ್ನ ಕೈಗೊಂಡಿದ್ದೇವೆ. ನಮ್ಮ ರಾಜ್ಯ ಸರ್ಕಾರ ಬೇಡಿಕೆ ಈಡೇರಿಸುವವರೆಗೂ ರಾಜ್ಯಾದ್ಯಂತ ನಮ್ಮ ಮುಷ್ಕರದಿಂದ ನಾವು ಹಿಂದೆ ಸರಿಯುವುದಿಲ್ಲ ಎಂದು ಅಳುವಿನೊಂದಿಗೆ ಆಕ್ರೋಶ ವ್ಯಕ್ತಪಡಿಸಿದರು.

ವರದಿ: ಸಂತೋಷ್ ಓಬಳ. ಗುಬ್ಬಿ

ತಿಪಟೂರು ನಗರದ ಕಲ್ಪತರು ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೊನಲು ಬೆಳಕಿನ ಪುರುಷರ ಹಾಗೂ ಮಹಿಳೆಯರ ವಾಲಿಬಾಲ್ ಕ್ರೀಡಾಕೂಟ ರೋಚಕವಾಗಿ ನಡೆಯುತ್ತಿದ್ದು,ನಡೆಯುತ್ತಿದ್ದು ಕ್ರೀಡಾಸಕ್ತರಿಗೆ ರಸದೌತಣ ನೀಡುತ್ತಿರುವ,ಕ್ರೀಡಾಕೂಟದ 2ನೇ ದಿನದ ಸನ್ಮಾನ ಕಾರ್ಯಕ್ರಮವನ್ನ ರಾಜ್ಯ ಖೋಖೋ ಫೆಡರೇಷನ್ ಅಧ್ಯಕ್ಷ ಬಿಜೆಪಿ ಮುಖಂಡ ಲೋಕೇಶ್ವರ್ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.


ಕಾರ್ಯಕ್ರಮದಲ್ಲಿ ಪುಲ್ವಾಮಾ ದಾಳಿ ಹುತಾತ್ಮ ಯೋಧರ ಸ್ಮರಣಾರ್ಥ ಮೌನಾಚರಣೆ ನಡೆಸಿ, ಇಂಡಿಯನ್ ಆರ್ಮಿ ವಾಲಿಬಾಲ್ ತಂಡದ ಸದಸ್ಯರನ್ನ ಸನ್ಮಾನಿಸಿ ಗೌರವ ಸಲ್ಲಿಸಲಾಯಿತು,ನಂತರ ರಾಜ್ಯಮಟ್ಟದ ವಾಲಿಬಾಲ್ ಆಟಗಾರರನ್ನ ಸನ್ಮಾನಿಸಲಾಯಿತು.


ಕಾರ್ಯಕ್ರಮ ಉದ್ಘಾಟಿಸಿದ ಲೋಕೇಶ್ವರ್ ಮಾತನಾಡಿ ವಾಲಿಬಾಲ್ ಕ್ರೀಡೆ ಮನುಷ್ಯನ ಆರೋಗ್ಯಕ್ಕೆ ಸಹಕಾರಿಯಾಗಿದ್ದು,ತಿಪಟೂರಿನಲ್ಲಿ ವಾಲಿಬಾಲ್ ಗೆ ತನ್ನದೇ ಅದ ಇತಿಹಾಸವಿದ್ದು ಜಾಲಿವಾಲಿಬಾಲ್ ಸಂಸ್ಥೆ ಸ್ಥಾಪನೆ ಮಾಡಿ,ಹಲವಾರು ರಾಜ್ಯ ಹಾಗೂ ರಾಷ್ಟ್ರೀ ಮಟ್ಟದ ಆಟಗಾರರನ್ನ ತಯಾರು ಮಾಡುವ ಜೊತೆಗೆ ಕ್ರೀಡಾಕೂಟ ನಡೆಸುವ ಮೂಲಕ ಯುವಕರಿಗೆ ಪ್ರೋತ್ಸಾಹ ನೀಡಿದೆ, ತಿಪಟೂರು ಕ್ರೀಡೆಗೆ ಯಾವಾಗಲೂ ಪ್ರೋತ್ಸಾಹ ನೀಡುತ್ತಾ ಬಂದಿದ್ದು, ಯುವಕರಿಗೆ ಕ್ರೀಡೆಯಲಿ ಆಸಕ್ತಿ ಮೂಡುವಂತೆ ಮಾಡಬೇಕು ಎಂದು ತಿಳಿಸಿದರು.
ಕಾಂಗ್ರೇಸ್ ಮುಖಂಡ ಸಿ.ಬಿ ಶಶಿಧರ್ ಮಾತನಾಡಿ ಕ್ರೀಡೆಗೆ ರಾಜ್ಯ ಹಾಗೂ ದೇಶಗಳ ಗಡಿದಟಿ ಬೆಳೆಯುವ ತಾಕತ್ತು ಇದೆ, ಅಮೆರಿಕದಲ್ಲಿ ಹುಟ್ಟಿದೆ,ಕ್ರೀಡೆ ತಿಪಟೂರಿನ ಹಳ್ಳಿಗಾಡಿನ ಮಣ್ಣಿನಲ್ಲಿ ಪ್ರದರ್ಶನವಾಗುತ್ತಿರುವುದು,ಹೆಮ್ಮಯ ಸಂಗತಿಯಾಗಿದ್ದು, ತಿಪಟೂರಿನಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಮನವಿ ಮಾಡಬೇಕು ಎಂದು ತಿಳಿಸಿದರು
ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಂಘದ ತಾಲ್ಲೋಕು ಅಧ್ಯಕ್ಷ ಹೆಚ್.ಇ ರಮೇಶ್.ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಕರೀಕೆರೆ,ದೈಹಿಕ ಶಿಕ್ಷಣ ನಿರ್ದೇಶಕರಾದ ಶಮಂತ.ನಗರಸಭೆ ಸದಸ್ಯ ಸಂಗಮೇಶ್.ರೋಟರಿ ಅಧ್ಯಕ್ಷ ಗವಿಯಣ್ಣ ಮುಂತ್ತಾದವರು ಉಪಸ್ಥಿತರಿದರು

ವರದಿ :ಮಂಜುನಾಥ್ ಹಾಲ್ಕುರಿಕೆ

ರಾತ್ರಿವೇಳೆ ರೈತರ ತೋಟದ ಮನೆಗಳಿಗೆ ವಿದ್ಯುತ್ ನೀಡಬೇಕು ಎಂದು ಒತ್ತಾಯಿಸಿ ತಿಪಟೂರು ತೋಟದ ಮನೆ ರೈತರ ಹಿತರಕ್ಷಣಾ ಸಮಿತಿ ವತಿಯಿಂದ ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು

ಬೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ರೈತರು ಬೆಸ್ಕಾಂ ಇಲಾಖೆ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾ ನಿರತರನ್ನ ಉದೇಶಿಸಿ ಮಾತನಾಡಿದ ಮುಖಂಡ ಮಡೇನೂರು ವಿನಯ್ ,ರಾತ್ರಿವೇಳೆ ಬೆಸ್ಕಾಂ ಇಲಾಖೆ ವಿದ್ಯುತ್ ನಿಲುಗಡೆ ಮಾಡುವುದರಿಂದ,ರೈತರ ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ,ರಾತ್ರಿವೇಳೆ ಕರೆಂಟ್ ತೆಗೆಯುವುದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ತೀವ್ರ ತೊಂದರೆಯಾಗುತ್ತಿದೆ,ಹಳ್ಳಿಗಳಲ್ಲಿ ರಾತ್ರಿವೇಳೆ ಚಿರತೆಕಾಟ ಹೆಚ್ಚಾಗಿದ್ದು ರಾತ್ರಿವೇಳೆ ತೋಟದಮನೆಗಳಲ್ಲಿ ವಾಸಮಾಡುವ ಜನರು ಜೀವಭಯದಲ್ಲಿ ಕಾಲಕಳೆಯಬೇಕು,ಈ ಹಿಂದೆ ತೋಟದ ಮನೆಗಳಿಗೆ ಕರಂಟ್ ನೀಡುತ್ತಿದ್ದಂತೆ ಮುಂದುವರೆಸಬೇಕು ನಮ್ಮ ಬೇಡಿಕೆ ಈಡೇರುವವರೆಗೆ ನಮ್ಮ ಮುಷ್ಕರ ಹಿಂಪಡೆಯುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.


ರೈತಮುಖಂಡ ಜಯ ಶರ್ಮ ಮಾತನಾಡಿ ಬೆಸ್ಕಾಂ ಇಲಾಖೆ ರಾತ್ರಿವೇಳೆ ಕರಂಟ್ ತೆಗೆಯುವ ಮೂಲಕ ತೊಂದರೆ ನೀಡುತ್ತಿದೆ ನೂರಾರು ವರ್ಷಗಳಿಂದ ನಮ್ಮ ಹಿರಿಯರು ಬೆಳೆಸಿರುವ, ತೆಂಗಿನ ಮರಗಳು ವಿದ್ಯುತ್ ಸಮಸ್ಯೆಯಿಂದ ನೀರಿನ ಸಮಸ್ಯೆಯಾಗಿ ತೋಟಗಳು ಸೊರಗುತ್ತಿವೆ, ವೋಲ್ಟ್ ಜ್ ಸಮಸ್ಯೆಯ ಕಾರಣಕ್ಕೆ ಲಕ್ಷಾಂತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಇಲ್ಲದೆ ರೈತರು ಪರದಾಡುತ್ತಿದ್ದಾರೆ,ರಾತ್ರಿವೇಳ ತೋಟದ ಮನೆಗಳಿಗೆ ಕರಂಟ್ ಇಲ್ಲದೆ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ,ಸರ್ಕಾರ ತೋಟದ ಮನೆಗಳಿಗೆ ವಿದ್ಯುತ್ ಸಮಸ್ಯೆಮಾಡದಂತೆ ನಿರ್ದೇಶನವಿದ್ದರು,ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ, ಕೂಡಲೇ ತೋಟದ ಮನೆಗಳಿಗೆ ವಿದ್ಯುತ್ ನೀಡಬೇಕು ಎಂದು ಒತ್ತಾಯಿಸಿದರು
ಸರ್ಕಾರದ ನಿರ್ದೇಶನದಂತೆ ವಿದ್ಯುತ್ ನೀಡಲು ಅಧಿಕಾರಿಗಳು ಒಪ್ಪಿಗೆ ನೀಡಿದ ಹಿನ್ನೆಲೆ ಪ್ರತಿಭಟನೆ ಕೈಬಿಡಲಾಯಿತು.

ವರದಿ :ಮಂಜುನಾಥ್ ಹಾಲ್ಕುರಿಕೆ

ತಿಪಟೂರು ನಗರದ ಕಲ್ಪತರು ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೊನಲು ಬೆಳಕಿನ ಪುರುಷ ಹಾಗೂ ಮಹಿಳೆಯರ ವಾಲಿಬಾಲ್ ಕ್ರೀಡಾಕೂಟಕ್ಕೆ ಕ್ರೀಡಾಜ್ಯೋತಿ ಬೆಳಗಿಸುವ ಮೂಲಕ ಶಾಸಕ ಕೆ.ಷಡಕ್ಷರಿ ಚಾಲನೆ ನೀಡಿದರು


ಕ್ರೀಡಾಜ್ಯೋತಿ ಸ್ವೀಕರಿಸಿ ಮಾತನಾಡಿದ ಮಾಜಿ ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಮನುಷ್ಯನ ಆರೋಗ್ಯ ಸಧೃಡವಾಗಿರಬೇಕಾದರೆ ಕ್ರೀಡೆಗಳು ಸಹಕಾರಿ, ಮನುಷ್ಯನ ದೇಹ ಹಾಗೂ ಮನಸ್ಸು ಸ್ವಾಸ್ಥ್ಯ ಹಾಗೂ ಲವಲವಿಕೆಯಿಂದ ಇರುವುದೇ ನಿಜವಾದ ಆರೋಗ್ಯ, ಉತ್ತಮ ಆರೋಗ್ಯಕ್ಕೆ ದೇಹವನ್ನ ಕ್ರೀಯಾಶೀಲವಾಗಿ ಇಡಬೇಕು,ಕ್ರೀಡೆ ಹಾಗೂ ವ್ಯಾಯಾಮಗಳು ದೇಹವನ್ನ ಸದೃಢವಾಗಿ ಇಡಲು ಸಹಕಾರಿಯಾಗಿದ್ದು,ಕ್ರೀಡೆಗಳನ್ನ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ತಿಪಟೂರಿನಲ್ಲಿ ಹೆಚ್ಚು ಪ್ರೋತ್ಸಹ ನೀಡುತ್ತಿದ್ದಾರೆ, ಹೆಚ್ಚು ಹೆಚ್ಚು ಕ್ರೀಡಾಕೂಟಗಳನ್ನ ನಡೆಸಬೇಕು ಎಂದು ತಿಳಿಸಿದರು
ಕ್ರೀಡಾಕೂಟ ಉದ್ಘಾಟಿಸಿದ ಶಾಸಕ ಕೆ.ಷಡಕ್ಷರಿ ಕ್ರೀಡೆಗಳು ಮನುಷ್ಯನ ಆರೋಗ್ಯಕ್ಕೆ ಸಹಕಾರಿಯಾಗಿದ್ದು,ತಿಪಟೂರು ಸ್ಪಂದನಾ ಕ್ರೀಡಾ ಹಾಗೂ ಸಾಂಸ್ಕೃತಿಕ ಸಂಘ ರಾಷ್ಟ್ರೀಯ ಕ್ರೀಡಾಕೂಟ ಆಯೋಜನೆ ಮಾಡಿರುವುದು ಶ್ಲಾಘನೀಯ ಎಂದು ತಿಳಿಸಿದರು
ಕಾರ್ಯಕ್ರಮದಲ್ಲಿ ನಗರಸಭಾ ಉಪಾಧ್ಯಕ್ಷೆ ಮೇಘನಾ ಭೂಷಣ್,ಖ್ಯಾತ ವೈದ್ಯರಾದ ಡಾ//ಶ್ರೀಧರ್,ತಿಪಟೂರು ಉಪವಿಭಾಗಾಧಿಕಾರಿ ಶ್ರೀಮತಿ ಸಪ್ತಶ್ರೀ,ತಹಸೀಲ್ದಾರ್ ಪವನ್ ಕುಮಾರ್ ಪೌರಾಯುಕ್ತ ವಿಶ್ವೇಶ್ವರಯ್ಯ ಬದರಗಡೆ ಮುಂತ್ತಾದವರು ಉಪಸ್ಥಿತರಿದರು.

ವರದಿ :ಮಂಜುನಾಥ್ ಹಾಲ್ಕುರಿಕೆ

ಕರಡಿ ಕೋಡಿಬಳಿ ಬಸ್ ಮತ್ತು ಬೈಕ್ ಭೀಕರ ಅಪಘಾತ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುತ್ತಾನೆ ಶೆಟ್ಟಿಹಳ್ಳಿ ಅಭಿನಾಶ್ ಎಂದು

ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಕರಡಿ ಕೋಡಿಯಲ್ಲಿ ಬೈಕ್ ಗೆ ಕೆ.ಎಸ್ .ಆರ್.ಟಿ ಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟ ಧಾರುಣ ಘಟನೆ ನಡೆದಿದ್ದು


ತಿಪಟೂರು ತಾಲ್ಲೂಕಿನ ಶೆಟ್ಟಿಹಳ್ಳಿ ಗ್ರಾಮದ ವಾಸಿ 17 ವರ್ಷದ ಅವಿನಾಶ್ ಮೃತ ದುರ್ದೈವಿ.


ನಿರ್ಮಾಣ ಹಂತದ ಚತುಷ್ಪತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಸುರಕ್ಷತಾ ನಿಯಮಗಳನ್ನ ಪಾಲನೆ ಮಾಡಿಲ್ಲ. ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಬೇಜಾವಾಬ್ದಾರಿಯಿಂದ ಕರಡಿ ಗ್ರಾಮ ಹಾಗೂ ಕರಡಿ ಕೋಡಿಯಲ್ಲಿ ನಿರಂತರವಾಗಿ ಅಪಘಾತಗಳು ನಡೆಯುತ್ತಿದ್ದು,ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಪಘಾತವಾಗಿದ್ದು ಮೃತನ ಕುಟುಂಬಕ್ಕೆ ಪರಿಹಾರ ನೀಡಬೇಕು. ಹೆದ್ದಾರಿ ಕಾಮಗಾರಿಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಕೈಗೊಳ್ಳ ಬೇಕು ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕೆ ಕೆ.ಬಿ ಕ್ರಾಸ್ ಪೊಲೀಸರು ಭೇಟಿ ನೀಡಿದ್ದು ಪ್ಎಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ

ವರದಿ :ಮಂಜುನಾಥ್ ಹಾಲ್ಕುರಿಕೆ

ತುರುವೇಕೆರೆ: ಮಡಿವಾಳ ಮಾಚಿದೇವ ಕೇವಲ ಮಡಿವಾಳ ಸಮುದಾಯಕ್ಕೆ ಸೀಮಿತವಾಗದೆ ಇಡೀ ಮನುಕುಲವನ್ನು ಜಾಗೃತಗೊಳಿಸಿದ ಸಾಕ್ಷಾತ್ ಭಗವಂತನು ಮೆಚ್ಚುವ ಕಾರ್ಯನಿಷ್ಠೆ ಅವರಲ್ಲಿ ಇತ್ತು ಎಂದು ಚಿತ್ರದುರ್ಗದ ಶ್ರೀ ಮಾಚಿದೇವ ಮಹಾಸಂಸ್ಥಾನ ಮಠದ ಜಗದ್ಗುರು ಡಾ. ಶ್ರೀ ಶ್ರೀ ಬಸವ ಮಾಚಿದೇವ ಮಹಾಸ್ವಾಮೀಜಿಗಳವರು ಮಾತನಾಡಿದರು, ತಾಲೂಕಿನ ದಂಡಿನಶಿವರ ಹೋಬಳಿಯ ಸಂಪಿಗೆ ಗ್ರಾಮದ ಮಡಿವಾಳ ಶ್ರೀ ಮಾಚಿದೇವರ ಸಂಘ ಆಯೋಜಿಸಿದ್ದ ವಚನ ಸಾಹಿತ್ಯ ಸಂರಕ್ಷಕ ವೀರಗಣಾಚಾರಿ ಶ್ರೀ ಮಡಿವಾಳ ಮಾಚಿದೇವರ ಪ್ರಥಮ ವರ್ಷದ ಜಯಂತೋತ್ಸವ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು. ಅಂದು ಮಡಿವಾಳ ಮಾಚಯ್ಯನು ಶರಣರ ಬಟ್ಟೆಗಳನ್ನ ಶುಭ್ರಗೊಳಿಸಲು ಐದು ನಿರ್ಬಂಧಗಳನ್ನು ವಿಧಿಸದ್ದನು, ಅವುಗಳಲ್ಲಿ ಮಧ್ಯಪಾನ ಮಾಡದ ಭ್ರಷ್ಟರಾಗಿರದ ಶರಣರ ಬಟ್ಟೆಯನ್ನು ಶುಭ್ರಗೊಳಿಸುತ್ತಿದ್ದನು. ಜಯಂತಿಯ ಉದ್ದೇಶ ಜಾಗೃತಿ ಅಂತಹ ಜಾಗೃತಿ ಬದುಕಿನಲ್ಲಿ ಬಂದರೆ ಸಹಜವಾಗಿ ಬದುಕಿನಲ್ಲಿ ಬದಲಾವಣೆ ಬರುತ್ತದೆ ನಮ್ಮ ಸಮುದಾಯದ ಬಗ್ಗೆ ಕಾಳಜಿ ಅಭಿಮಾನ ಗೌರವ ನಾವು ಬೆಳೆಸಿಕೊಳ್ಳದಿದ್ದರೆ ಸಮುದಾಯ ಸರ್ವನಾಶವಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು. ದೇವರಿಗೆ ಗುರುಗಳಿಗೆ ಪಂಜು ಹಿಡಿದು ನೆಲಮಡಿ ಮಾಡುವ ನಮ್ಮ ಸಂಸ್ಕೃತಿ ಪರಂಪರೆ ಬೆಲೆ ಕಟ್ಟಲಾಗದು ಆದರೆ ನಮ್ಮ ಮಕ್ಕಳಿಗೆ ನಿಮ್ಮ ವೃತ್ತಿಯನ್ನು ಕೊಡಬೇಡಿ ಬದಲಾಗಿ ಅವರನ್ನು ಅಧಿಕಾರಿ ವಿದ್ಯಾವಂತರನ್ನಾಗಿ ಮಾಡಿ ನಮ್ಮ ಸಮುದಾಯಕ್ಕೆ ಆಸ್ತಿಯನ್ನಾಗಿ ಮಾಡಿ ಎಂದರು. ಇಡೀ ಜಗತ್ತಿನಲ್ಲಿ ಸೂತಕವಿಲ್ಲದ ಸಮಾಜ ನಮ್ಮದು ಬದಲಾಗಿ ಸೂತಕ ತೆಗೆಯುವುದು ನಮ್ಮ ಸಮುದಾಯದ ನಾವೇ ನಾವೆಲ್ಲರೂ ಸೇರಿ ಸಮಾಜವನ್ನು ಕಟ್ಟಬೇಕು, ಕೆಲವು ವರ್ಷಗಳಲ್ಲಿ ಮಡಿವಾಳ ಸಮಾಜ ಮುಖ್ಯ ವಾಹಿನಿಗೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಾರ್ಯಕ್ರಮದ ವಿಶೇಷ ಉಪನ್ಯಾಸ ಮಾಡಿದ ಪ್ರವಚನಕಾರ ಯಡಿಯೂರು ಶ್ರೀ ಮೂಡಲಗಿರಿಯವರು ಶ್ರೀ ಮಡಿವಾಳ ಮಾಚಿದೇವರ ವೃತ್ತಾಂತವನ್ನು ತಿಳಿಸಿ 12ನೇ ಶತಮಾನದ ಕಲ್ಯಾಣದ ಕ್ರಾಂತಿಗೆ ಶ್ರೀ ಮಾಚಿದೇವರ ಕೊಡುಗೆಯನ್ನ ವೈಭವಿಕರಿಸಿದರು. ನಾನು 2,796 ವೇದಿಕೆಯಲ್ಲಿ ಶ್ರೀ ಮಾಚಿದೇವರ ಉಪನ್ಯಾಸವನ್ನು ಮಾಡಿದ್ದೇನೆ ಅಂದಿನ ನಮ್ಮ ವೃತ್ತಿಗಿಂತ ಇಂದು ನಮ್ಮ ಮಕ್ಕಳಿಗೆ ಶಿಕ್ಷಣ ನೀಡಿ ಸಮಾಜದ ಮುಖ್ಯ ವಾಹಿನಿಗೆ ನಾವು ಬರಬೇಕು ಎಂದರು.ಕಾರ್ಯಕ್ರಮದಲ್ಲಿ ಮಾಜಿ ತುಮಕೂರು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ಮುದಿಮುಡು ರಂಗಸ್ವಾಮಯ್ಯನವರು ಮಾತನಾಡಿ ನಮ್ಮ ಸಮಾಜ ಹಿಂದುಳಿದಿದೆ ವಿದ್ಯಾವಂತರ ಸಂಖ್ಯೆ ಕಡಿಮೆ ಇದೆ ಎಂಬ ಉದ್ದೇಶದಿಂದ ಹಲವಾರು ಸಮಾವೇಶಗಳನ್ನ ಕೈಗೊಳ್ಳಲಾಗುತ್ತಿದೆ, ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ನಾವು ಹಿಂದುಳಿದಿದ್ದೇವೆ ನಮ್ಮ ಜಾತಿಯನ್ನ ಪರಿಶಿಷ್ಟ ಜಾತಿಗೆ ಸೇರಿಸಲು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ನಿಟ್ಟೂರು ಸಮಾಜ ಸೇವಕರಾದ ಎನ್. ಗಂಗಾಧರ್ ಮಡಿವಾಳ್ ಅವರಿಂದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಶೇ 80% ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಜಗದ್ಗುರು ಡಾ. ಶ್ರೀ ಶ್ರೀ ಬಸವ ಮಾಚಿದೇವ ಮಹಾಸ್ವಾಮೀಜಿಗಳವರು, ಯಡೆಯೂರು ಶ್ರೀ ಮೂಡಲಗಿರಿಯವರು, ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ಮುದಿಮುಡು ರಂಗಸ್ವಾಮಯ್ಯ, ಜಿಲ್ಲಾ ಧಾರ್ಮಿಕ ಪರಿಷತ್ ಮಾಜಿ ಸದಸ್ಯರಾದ ಸಂ.ಕೃ. ಶ್ರೀಧರ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಿವಲಿಂಗಮೂರ್ತಿ, ನಿಟ್ಟೂರು ಸಮಾಜ ಸೇವಕರಾದ ಎನ್. ಗಂಗಾಧರ್ ಮಡಿವಾಳ್ , ಸಂಪಿಗೆ ಶ್ರೀ ಮಡಿವಾಳ ಮಾಚಿದೇವರ ಸಂಘದ ಅಧ್ಯಕ್ಷರು , ಉಪಾಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಮತ್ತು ಜಿಲ್ಲಾ ಶ್ರೀ ಮಡಿವಾಳ ಮಾಚಿದೇವರ ಸಂಘದ ಅಧ್ಯಕ್ಷರು , ಉಪಾಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು, ಉಪಸ್ಥಿತರಿದ್ದರು. ಮಡಿವಾಳ ಸಮುದಾಯದವರು ಮತ್ತು ಸಾರ್ವಜನಿಕರ ಸದರಿ ಕಾರ್ಯಕ್ರಮಕ್ಕೆ ಹಾಜರಾಗಿದ್ದರು.

ವರದಿ: ಸಂತೋಷ್ ಓಬಳ. ಗುಬ್ಬಿ

ತಿಪಟೂರು ನಗರದಅರಸುನಗರದಲ್ಲಿ ಹಳೇ ದ್ವೇಷದ ಹಿನ್ನೆಲೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು ಯುವಕನೋರ್ವನ ಕುತ್ತಿಗೆಗೆ ಚಾಕುವಿಂದ ಇರಿದು ಕೊಲೆ ಯತ್ನನಡೆಸಲಾಗಿದೆ.

ತಿಪಟೂರು ನಗರದ ಅರಸು ನಗರದ ವಾಸಿ ಮುಬಾರಕ್ ಪಾಷ ಹಾಗೂ ಸುಹೇಲ್ ನಡುವೆ ಆಗಿಂದಾಗ್ಗೆ ಗಲಾಟೆಗಳು ನಡೆಯುತ್ತಲೇ ಇದ್ದು ಈ ಹಿಂದೆ ಸುಹೇಲ್ ಸಂಬಂದಿ ಗೋವರ್ ಎಂಬುವವನಿಗೆ ಮುಬಾರಕ್ ಗುಂಪು ಚಾಕುವಿನಿಂದ ಹಲ್ಲೆ ನಡೆಸಿತ್ತು, ಇದೇ ದ್ವೇಷದ ಹಿನ್ನೆಲೆ ಇಂದು ಎರಡು ಗುಂಪುಗಳ ನಡುವೆ ಗಲಾಟೆ ನಡೆದು.ತಿಪಟೂರು ನಗರದ ಅರಸು ನಗರವಾಸಿ ಮುಬಾರಕ್ ಎನ್ನುವವನಿಗೆ ಸುಹೇಲ್ ಚಾಕುವಿನಿಂದ ಇರಿದಿದ್ದು, ಮುಬಾರಕ್ ಕುತ್ತಿಗೆ ಭಾಗಕ್ಕೆ ಕುಯ್ದಿದ್ದು
ಚಿಕಿತ್ಸೆಗಾಗಿ ತಿಪಟೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ, ಸ್ಥಳಕ್ಕೆ ತಿಪಟೂರು ನಗರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತಿಪಟೂರು ನಗರದ ಕೋಮು ಸೂಕ್ಷ್ಮ ಪ್ರದೇಶವಾದ ಗಾಂಧಿ ನಗರದಲ್ಲಿ ಗೋಮರ್ ಗುಂಪು ಹಾಗೂ ಮುಬಾರಕ್ ಗುಂಪುಗಳು, ಪ್ರಾಬಲ್ಯ ಸ್ಥಾಪನೆಗಾಗಿ ಗಲಾಟೆ ಹೊಡೆದಾಟಗಳು ನಡೆಯುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದು,ಪೊಲೀಸ್ ಇಲಾಖೆ ಸ್ಥಳೀಯರ ಆರೋಪದಂತೆ ರೌಡಿಗ್ಯಾಂಗ್ ಗಳು ತಲೆ ಎತ್ತದಂತೆ ಕಾನೂನಿನ ಅಂಕುಶ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.

ವರದಿ :ಮಂಜುನಾಥ್ ಹಾಲ್ಕುರಿಕೆ.

ತಿಪಟೂರು ನಗರದ ದೊಡ್ಡಯ್ಯನಪಾಳ್ಯ ಗ್ರಾಮದ ದಲಿತ ಮಹಿಳೆ ಮೇಲೆ ದೌರ್ಜನ್ಯವಾಗಿದ್ದು ನೊಂದವರ ಪರ ಕೆಲಸ ಮಾಡಬೇಕಾದ ಪೊಲೀಸ್ ಇಲಾಖೆ ದೌರ್ಜನ್ಯ ನಡೆಸಿದ ವ್ಯಕ್ತಿಗಳ ಪರ ಶಾಮಿಲಾಗಿ ದಲಿತ ಮಹಿಳೆಗೆ ಅನ್ಯಾಯ ಮಾಡಲಾಗಿದೆ, ತಿಪಟೂರು ಪೊಲೀಸ್ ಉಪ ಅಧೀಕ್ಷಕರು ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಸಮ್ಮತ ತನಿಖೆ ನಡೆಸಿಲ್ಲ. ಪ್ರಕರಣದ ಮರುತನಿಖೆ ನಡೆಸಬೇಕು, ನೊಂದ ಕುಟುಂಬಕ್ಕೆ ನ್ಯಾಯದೊರಕಿಸಿಕೊಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಭೀಮ್ ಆರ್ಮಿಯಿಂದ ತಿಪಟೂರು ಆಡಳಿತ ಸೌಧದ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ರಾಜ್ಯಪಾಲರು ಹಾಗೂ ಗೃಹಸಚಿವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಪ್ರತಿಭಟನಾ ನಿರತರನ್ನ ಉದೇಶಿಸಿ ಕರ್ನಾಟಕ ಭೀಮ್ ಆರ್ಮಿ ರಾಜ್ಯಾಧ್ಯಕ್ಷ ಮತೀನ್ ಕುಮಾರ್ ಮಾತನಾಡಿ ತಿಪಟೂರು ನಗರದ ದೊಡ್ಡಯ್ಯನಪಾಳ್ಯ ಗ್ರಾಮದ ಮಂಜುಳಮ್ಮ ಕೋಂ ಬಸವರಾಜು ಎಂಬುವವರಿಂದ ಹಣಕಾಸಿನ ಸಹಾಯಪಡೆದ ಅದೇ ಗ್ರಾಮದ ರಾಜೇಶ್ ಬಿನ್ ಜಯರಾಮಯ್ಯ ಎಂಬುವವರು ದಲಿತ ಮಹಿಳೆ ಮಂಜುಳಮ್ಮನ ಮೇಲೆ ಜಾತಿದೌರ್ಜನ್ಯ ನಡೆಸಿ,ಕೊಲೆ ಬೆದರಿಕೆ ಹಾಕಿದರು,ನೊಂದ ಮಹಿಳೆ ತಿಪಟೂರು ನಗರಪೊಲೀಸ್ ಠಾಣೆಗೆ ದೂರು ನೀಡಿದರೆ, ಪ್ರಕರಣದ ತನಿಖೆನಡೆಸಿ ಪ್ರಕರಣ ದಾಖಲಿಸದೇ,ದೌರ್ಜನ್ಯ ನಡೆಸಿದ ರಾಜೇಶ್ ಪರವಾಗಿ ವಕಾಲತ್ತು ವಹಿಸಿದ ಪೊಲೀಸರು, ಪ್ರಕರಣ ದಾಖಲಿಸದೆ, ವಾಪಾಸ್ ಕಳಿಸಿದರು.ದೌರ್ಜನ್ಯದಿಂದ ನೊಂದಮಹಿಳೆ ತುಮಕೂರು ಜಿಲ್ಲಾಪೊಲೀಸ್ ವರೀಷ್ಠಾಧಿಕಾರಿಗಳಿಗೆ ದೂರು ನೀಡಿ ಎಸ್ಪಿ ಯವರ ಸೂಚನೆ ಮೇರೆಗೆ ಅಟ್ರಾಸಿಟಿ ಕೇಸ್ ದಾಖಲಿಸಲಾಗಿತ್ತು, ಆದರೆ ಪ್ರಕರಣದ ತನಿಖೆ ನಡೆಸಿದ ತನಿಖಾಧಿಕಾರಿ ತಿಪಟೂರು ಪೊಲೀಸ್ ಉಪ ಅಧೀಕ್ಷಕರು ,ದಲಿತರ ಮೇಲೆ ದೌರ್ಜನ್ಯ ನಡೆಸಿದ ರಾಜೇಶ್ ಪ್ರಭಾವಕ್ಕೆ ಒಳಗಾಗಿ ಪರಿಶಿಷ್ಠ ದೌರ್ಜನ್ಯ ಪ್ರಕರಣ ನ್ಯಾಯಸಮ್ಮತವಾಗಿ ನಡೆಸದೆ ಅನ್ಯಾಯ ಮಾಡಿದ್ದಾರೆ,ಪ್ರಕರಣದ ಸಾಕ್ಷಿಗಳನ್ನ ಬೆದರಿಸಿ ತಮ್ಮ ಇಚ್ಚೆಯಂತೆ ಹೇಳಿಕೆ ಪಡೆದಿದ್ದಾರೆ, ತಿಪಟೂರು ಡಿವೈಎಸ್ಪಿ ಹಾಗೂ ಅವರ ಕಚೇರಿ ಸಿಬ್ಬಂದಿ ದಲಿತ ವಿರೋಧಿಗಳಾಗಿ ವರ್ತಿಸುತ್ತಿದ್ದು,ಇವರಿಂದ ದಲಿತರು ನ್ಯಾಯ ನಿರೀಕ್ಷೆ ಮಾಡುವುದು,ಕಷ್ಟವಾಗಿದ್ದು, ಡಿವೈಎಸ್ಪಿ ಯವರು ಸಲ್ಲಿಸಿರುವ ದೋಷಾರೋಪಪಟ್ಟಿ ರದ್ದುಗೊಳ್ಳಿ ಬೇರೆ ಅಧಿಕಾರಿಗಳಿಂದ ಪ್ರಕರಣದ ಮರುತನಿಖೆ ನಡೆಸಬೇಕು, ನೊಂದ ದಲಿತ ಮಹಿಳೆ ಮಂಜುಳಮ್ಮ ಕುಟುಂಬಕ್ಕೆ ಸೂಕ್ತ ರಕ್ಷಣೆ ಹಾಗೂ ನ್ಯಾಯದೊರಕಿಸಿಕೊಡಬೇಕು ಎಂದು ಒತ್ತಾಯಿಸಿದರು
ಪ್ರತಿಭಟನೆಯಲ್ಲಿ ಕರ್ನಾಟಕ ಭೀಮ್ ಆರ್ಮಿ,ಮುಖಂಡರಾದ ಪ್ರದೀಪ್,ಕಾನೂನು ಸಲಹೆಗಾರ ರಾಜೀವ್ ಶಾಂಬು,ದರ್ಶನ್ ಪಂಡಿತ್ ಸಿಂಹ, ಭೀಮ್ ಆರ್ಮಿ ಯುವ ಮುಖಂಡ ಮೋಹನ್ ಬಾಬು,ಹರೀಶ್ ಯಗಚೀಕಟ್ಟೆ .ನಾಗ್ತೀಹಳ್ಳಿ ಶಶಿಕುಮಾರ್ .ಕವಿತ ,ಮಂಜುಳ, ಬಸವರಾಜು,ಮುಂತ್ತಾದವರು ಉಪಸ್ಥಿತರಿದರು.

ವರದಿ :ಮಂಜುನಾಥ್ ಹಾಲ್ಕುರಿಕೆ

ರಾಜ್ಯ ಗ್ರಾಮ ಆಡಳಿತಾಧಿಕಾರಿಗಳ ಸಂಘ ನಡೆಸುತ್ತಿರುವ ಅನಿರ್ಧಿಷ್ಠಾವಧಿ ಮುಷ್ಕರ 3ನೇ ದಿನಕ್ಕೆ ಕಾಲಿಟ್ಟಿದ್ದು, ಹೋರಾಟಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಕಂದಾಯ ಇಲಾಖೆ ನೌಕರರ ಸಂಘ ಬೇಷರತ್ ಬೆಂಬಲ ಸೂಚಿಸಿದೆ

,ಪ್ರತಿಭಟನಾ ಸ್ಥಳಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಮೇಶ್, ಮಾತನಾಡಿ ಆಡಳಿತಾಧಿಕಾರಿಗಳ ನ್ಯಾಯಯುತ ಬೇಡಿಕೆಗಳನ್ನ ಸರ್ಕಾರ ಈಡೇರಿಸಬೇಕು, ಗ್ರಾಮ ಆಡಳಿತಾಧಿಕಾರಿಗಳ ಹೋರಾಟಕ್ಕೆ ಸರ್ಕಾರಿ ನೌಕರರ ಸಂಘ ಬೆಂಬಲ ನೀಡುತ್ತಿದೆ ಎಂದು ತಿಳಿಸಿದರು,ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ರವಿಕುಮಾರ್
ಗ್ರಾಮಾಡಳಿತಾಧಿಕಾರಿಗಳ ಸಂಘದ ಹೋರಾಟಕ್ಕೆ ಕಂದಾಯ ಇಲಾಖೆ ನೌಕರರ ಸಂಘ ಬಾಹ್ಯ ಬೆಂಬಲ ನೀಡುತ್ತಿದೆ,ಸರ್ಕಾರ ಗ್ರಾಮ ಆಡಳಿತಾಧಿಕಾರಿಗಳ ನ್ಯಾಯಯುತ ಬೇಡಿಕೆ ಪೂರೈಕೆ ಮಾಡಲು ಕ್ರಮಕೈಗೊಳ್ಳಬೇಕು,ಎಂದು ತಿಳಿಸಿದರು.


ತಿಪಟೂರು ತಾಲ್ಲೂಕು ಗ್ರಾಮ ಆಡಳಿತಾಧಿಕಾರಿಗಳ ಸಂಘದ ಅಧ್ಯಕ್ಷ ರವಿ ಕುಮಾರ್ ಮಾತನಾಡಿ ಗ್ರಾಮ ಆಡಳಿತಾಧಿಕಾರಿಗಳ ಸಂಘದಿಂದ ರಾಜ್ಯದಾದ್ಯಂತ ಅನಿರ್ಧಿಷ್ಠಾವಧಿ ಮುಷ್ಕರ ನಡೆಸಲಾಗುತ್ತಿದ್ದು, ಸೇವಾ ಭದ್ರತೆ, ಹಾಗೂ ಹೆಚ್ಚುವರಿ ಕೆಲಸಗಳಿಂದ ವಿಮುಕ್ತಿ,ಗ್ರಾಮಾಡಳಿತಾಧಿಕಾರಿಗಳ ಜಾಬ್ ಚಾಟ್ ನಿಗದಿ. ಹಾಗೂ ನೆನೆಗುದಿಗೆ ಬಿದ್ದಿರುವ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಬೇಕು. ಹಾಗೂ ಗ್ರಾಮ ಆಡಳಿತಾಧಿಕಾರಿಗಳಿಗೆ ಸೇವಾ ಬಡ್ತಿ ನೀಡಬೇಕು,ಗ್ರಾಮೀಣ ಪ್ರದೇಶದಲ್ಲಿ ಸರ್ವರ್ ಸಮಸ್ಯೆಯಿಂದ ನಿಗಧಿತ ಸಮಯದಲ್ಲಿ ಕೆಲಸ ನಿರ್ವಹಿಸಲು ಸಮಸ್ಯೆ ಉಂಟಾಗಿದ್ದು, ಸಮಸ್ಯೆಗೆ ಸೂಕ್ತ ಪರಿಹಾರ ನೀಡಬೇಕು, ಅನುಕಂಪದ ನೇಮಕಾತಿಯಲ್ಲಿ ಪ್ರಥಮದರ್ಜೆ ಸಹಾಯಕರ ನೇಮಕಾತಿಗೆ ಎಸ್ಎಸ್ ಎಲ್ ಸಿ ಹಾಗೂ ಪಿಯುಸಿ ಪರಿಗಣಿಸಬೇಕು. ಪ್ರಯಾಣಭತ್ಯೆ ಮಾಡಬೇಕು. ಮಾತೃ ಇಲಾಖೆಗೆ ಕೆಲಸಗಳ ಜೊತೆ ಬೆಳೆಸಮೀಕ್ಷೆ ಹಾಗೂ ಪೊಲೀಸ್ ಇಲಾಖೆ ನೀಡುವ ಮಹಜರ್ ಜವಾಬ್ದಾರಿಯನ್ನು ನಿಬಾಯಿಸಬೇಕು.ಇತ್ತಿಚಿನ ದಿನಗಳಲ್ಲಿ ಕಂದಾಯ ಇಲಾಖೆಯ ಬಹುತೇಕ ಜವಾಬ್ದಾರಿ ಗ್ರಾಮಾಡಳಿತಾಧಿಕಾರಿಗಳ ಮೇಲೆ ಇದ್ದು, ಕಾರ್ಯಬಾರದ ಒತ್ತಡ ಹೆಚ್ಚಾಗುತ್ತಿದೆ‌.ಗ್ರಾಮೀಣ ಪ್ರದೇಶದಲ್ಲಿ ಕೆಲಸಮಾಡುವ ಗ್ರಾಮ ಆಡಳಿತಾಧಿಕಾರಿಗಳು ಇತ್ತಿಚಿನ ದಿನಗಳಲ್ಲಿ ಸರ್ವರ್ ಸಮಸ್ಯೆ ಹಾಗೂ ನೆಟ್ವರ್ಕ್ ಸಮಸ್ಯೆ ಕಾರಣಕ್ಕೆ ಸೂಕ್ತ ಸಮಯದಲ್ಲಿ ಕೆಲಸ ಮಾಡಲು ಸಾಧ್ಯವಾಗದೇ ಮೇಲಾಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗಿ, ಶಿಕ್ಷೆ ಅನುಭವಿಸುವ ಸಂದರ್ಭಗಳೆ ಹೆಚ್ಚಾಗಿವೆ, ನಮಗೆ ಸೂಕ್ತವಾಗಿ ತಾಂತ್ರಿಕ ಉಪಕರಣಗಳನ್ನ ಒದಗಿಸಬೇಕು. ಹಾಗೂ ನಿರ್ಧಿಷ್ಟ ಜಾಬ್ ಚಾಟ್ ನೀಡಬೇಕು,ಕಾರ್ಯಬಾರದ ಒತ್ತಡದ ಕಾರಣಕ್ಕೆ ಅನೇಕ ನೌಕರರು ಮಾನಸಿಕ ಕಿನ್ನತೆ ಹಾಗೂ ಅನಾರೋಗ್ಯಕ್ಕೆ ಒಳಗಾಗುತ್ತದ್ದು, ಸರ್ಕಾರ ಹೆಚ್ಚುವರಿ ಆರೋಗ್ಯ ಸೌಲಭ್ಯ ನೀಡಬೇಕು.ನಮಗೆ ಸೇವಾ ಭದ್ರತೆ ಜೊತೆಗೆ ಆಕಸ್ಮಿಕ ಅವಗಡಗಳಲ್ಲಿ ಸಾವು ಸಂಭವಿಸಿದರೆ ಹೆಚ್ವಿನ ಪರಿಹಾರ ನೀಡಬೇಕು. ಪ್ರಯಾಣ ಭತ್ಯೆ ಹಾಗೂ ವರ್ಗಾವಣೆಗೆ ಸೂಕ್ತ ಕಾನೂನು ರೂಪಿಸಿ ವರ್ಗಾವಣೆಗೆ ಚಾಲನೆ ನೀಡಬೇಕು ಎನ್ನುವುದು ಸೇರಿದಂತೆ ಹಲವಾರು ಬೇಡಿಕೆಗಳಿಗೆ ಒತ್ತಾಯಿಸಿ ಹಲವಾರು ವರ್ಷಗಳಿಂದ ಹೋರಾಟ ಮಾಡುತ್ತಾ ಬಂದಿದ್ದು ಸರ್ಕಾರ ನಮ್ಮ ಮನವಿಗೆ ಯಾವುದೇ ನ್ಯಾಯ ದೊರಕಿಸಿರುವುದಿಲ್ಲ,ನಮ್ಮ ನ್ಯಾಯಯುತ ಬೇಡಿಕೆ ಈಡೇರುವವರೆಗೆ ಅನಿರ್ಧಿಷ್ಠಾವಧಿ ಮುಷ್ಕರದಿಂದ ಹಿಂದೆ ಸರಿಯುವುದಿಲ್ಲ ಸರ್ಕಾರ ಕೂಡಲೇ ನಮ್ಮ ಬೇಡಿಕೆ ಈಡೇರಿಸಬೇಕು ಎಂದು ತಿಳಿಸಿದರು
ಪ್ರತಿಭಟನೆಯಲ್ಲಿ ಕಂದಾಯ ಇಲಾಖೆ ನೌಕರರ ಸಂಘದ ಖಜಾಂಚಿ ಅಶೋಕ್ ಕೆ.ಎಂ, ಗ್ರಾಮ ಆಡಳಿತಾಧಿಕಾರಿಗಳ ಸಂಘದ ಮುಖಂಡರಾದ ದೀಪಕ್ ಬೂದಾಳ್. ಶಿವರಾಮ್.ಶ್ರೀಹರ್ಷ,ರವಿಶಂಕರ್.ಭವ್ಯ.ರಾಜು.ಮುಂತ್ತಾದವರು ಉಪಸ್ಥಿತರಿದರು

ವರದಿ :ಮಂಜುನಾಥ್ ಹಾಲ್ಕುರಿಕೆ

ತಿಪಟೂರು ತಾಲ್ಲೂಕಿನ ಕಸಬಾಹೋಬಳಿ ಮತ್ತಿಹಳ್ಳಿ ಮುಖತೊಳೆಯಲು ಹೋದ ಯುವಕ ಕಾಲು ಜಾರಿಬಿದ್ದು ಯುವಕ ನೀರುಪಾಲಾಗಿರುವ ಘಟನೆ ನಡೆದಿದೆ, ತಾಲ್ಲೂಕಿನ ಮತ್ತಿಹಳ್ಳಿ ಗ್ರಾಮದ ದಯಾನಂದ್ 19 ವರ್ಷ ಮೃತ ದುರ್ದೈವಿ
ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಹೊನ್ನವಳ್ಳಿ ಪೊಲೀದರು ಭೇಟಿನೀಡಿದ್ದು
ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ

error: Content is protected !!