ಆಲ್ಬೂರು ಬಳಿ ಬೈಕ್ ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಇಬ್ಬರ ದುರ್ಮರಣ.

Spread the love

ತಿಪಟೂರು ತಾಲ್ಲೋಕಿನ ನೊಣವಿನಕೆರೆ ಹೋಬಳಿ ಆಲ್ಬುರು ಕೆರೆ ಏರಿ ಮೇಲೆ ಬೈಕ್ ಗೆ ಕೆ.ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.

ತುರುವೇಕೆರೆ ಟೌನ್ ವಾಸಿ ಯೋಗೇಶ್ ಬಿನ್ ಬಸವರಾಜು, ಮೆಕ್ಯಾನಿಕ್ ಕೆಲಸ ಹಾಗೂ ದಯಾನಂದ ಬಿನ್ ಶ್ರೀನಿವಾಸ್ ವೆಲ್ಡಿಂಗ್ ಕೆಲಸ ಇಬ್ಬರು ಬೈಕ್ ನಲ್ಲಿ ತೆರಳುವಾಗ ಆಲ್ಬೂರು ಕೆರೆ ಏರಿಮೇಲೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದಪರಿಣಾಮ ಬೈಕ್ ಸವಾರರಿಬ್ಬರು ಸಾವನ್ನಪ್ಪಿರುತ್ತಾರೆ.ಸ್ಥಳಕ್ಕೆ ನೊಣವಿನಕೆರೆ ಪೊಲೀಸರು ಭೇಟಿ ನೀಡಿಪರಿಶೀಲನೆ ನಡೆಸಿದ್ದು.ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ವರದಿ : ಮಂಜುನಾಥ್ ಹಾಲ್ಕುರಿಕೆ

Leave a Reply

Your email address will not be published. Required fields are marked *

error: Content is protected !!