
ತಿಪಟೂರು ತಾಲ್ಲೋಕಿನ ಪುಣ್ಯಕ್ಷೇತ್ರ ಹಾಗೂ ಕಲ್ಪತರು ನಾಡಿನ ಶಕ್ತಿಪೀಠ ಎಂದೇ ಖ್ಯಾತವಾಗಿರುವ ದಸರೀಘಟ್ಟ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಕಾರ್ತಿಕ ಅಮಾವಾಸ್ಯೆ ಅಂಗವಾಗಿ ಅದ್ದೂರಿಯಾಗಿ ದೀಪಾರಾಧನೆ ನೆರವೇರಿಸಲಾಯಿತು

ಆದಿಚುಂಚನಗಿರಿ ದಸರೀಘಟ್ಟ ಶಾಖಾಮಠದ ಪೀಠಾಧ್ಯಕ್ಷರಾದ ಶ್ರೀ ಚಂದ್ರಶೇಖರನಾಥ ಮಹಾಸ್ವಾಮೀಜಿಯವರು ವಿಶೇಷ ದೀಪಾರಾಧನೆ ನೆರವೇರಿಸಿದರು
ಶ್ರೀಚೌಡೇಶ್ವರಿದೇವಿ ಹಾಗೂ ಶ್ರೀ ಕರಿಯಮ್ಮದೇವಿಯವರಿಗೆ ವಿಶೇಷ ಅಲಂಕಾರ ನೆರವೇರಿಸಿ ಶ್ರೀ ಚೌಡೇಶ್ವರಿ ದೇವಿಯವರ ಉತ್ಸವ ಮೂರ್ತಿಯನ್ನ ರಥದಲ್ಲಿ ಕೂರಿಸಿ ಪ್ರಾಕಾರೋತ್ಸವ ನೆರವೇರಿಸಲಾಯಿತು

ದೇವಾಲಯಕ್ಕೆ ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಭೇಟಿನೀಡಿ ಪೂಜೆಸಲಿಸಿದರು
ವರದಿ:ಮಂಜುನಾಥ್ ಹಾಲ್ಕುರಿಕೆ









Leave a Reply