

ತಿಪಟೂರು ತಾಲ್ಲೋಕಿನ ಹೊನ್ನವಳ್ಳಿ ಹೋಬಳಿ ಗ್ಯಾರಘಟ್ಟ ಗ್ರಾಮದ ತೋಟದ ಮನೆ ಮುಂಬಾಗ ಕಟ್ಟಿ ಹಾಕಿದ ಹಸುವಿನ ಮೇಲೆ ಚಿರತೆಯೊಂದು ದಾಳಿಮಾಡಿ,ತಿಂದು ಹಾಕಿರುವ ಘಟನೆ ನಡೆದಿದೆ.

ಗ್ಯಾರಘಟ್ಟ ಗ್ರಾಮದ ಸಿದ್ದೇಶ್ ಎಂಬುವವರಿಗೆ ಸೇರಿದ ಹಸುವನ್ನು ಮನೆಯಮುಂದೆ ಕಟ್ಟಿಹಾಕಲಾಗಿದು.ಸಂಜೆ 6.30ರ ಸಮಯದಲ್ಲಿ ಹಸುವಿನಮೇಲೆ ಚಿರತೆ ದಾಳಿಮಾಡಿ ಬಲಿಪಡೆದಿದೆ
ಗ್ಯಾರಘಟ್ಟ ಗ್ರಾಮದಲ್ಲಿ ಕಳೆದ ಒಂದುವಾರದಿಂದ ಚಿರತೆ ಕಾಣಿಸಿಕೊಂಡ ಬಗ್ಗೆ ಅರಣ್ಯ ಇಲಾಖೆಗೆ ಗ್ರಾಮಸ್ಥರು,ಮಾಹಿತಿ ನೀಡಿದರು,ಆದರೆ ಅರಣ್ಯ ಇಲಾಖೆ ಚಿರತೆ ಸೆರೆಹಿಡಿಯದೆ ಇರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದ್ದುಸ್ಥಳಕ್ಕೆ ತಿಪಟೂರು ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ
ವರದಿ:ಮಂಜುನಾಥ್ ಹಾಲ್ಕುರಿಕೆ