ತಿಪಟೂರು ರಂಗಾಪುರ ಬಳಿ ಚಿರತೆ ಸೆರೆ, ಚಿರತೆ ಬಾಲಹಿಡಿದು ಅರಣ್ಯ ಇಲಾಖೆ ಬಲೆಗೆ ಕೆಡವಿದ ಯುವಕ

Spread the love

ತಿಪಟೂರು ತಾಲ್ಲೋಕಿನ ಕಸಬಾ ಹೋಬಳಿ ಕೆರೆಗೋಡಿ ರಂಗಾಪುರ ಬಳಿ ಹಲವಾರು ದಿನಗಳಿಂದ ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದ ಚಿರತೆಯನ್ನ ಸಾರ್ವಜನಿಕರ ನೆರವಿನೊಂದಿಗೆ ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ

ತಿಪಟೂರು ತಾಲ್ಲೋಕಿನ ರಂಗಾಪುರ ಗ್ರಾಮದ ಪುರಲೇಹಳ್ಳಿ ರಸ್ತೆ ಕುಮಾರಣ್ಣ ಎಂಬುವವರ ತೋಟದಲ್ಲಿ ಬೀಡುಬಿಟ್ಟಿದ ಸುಮಾರು 04ರಿಂದ 05 ವರ್ಷ ಪ್ರಾಯದ ಚಿರತೆಯನ್ನ ಹಿಡಿಯಲು ಅರಣ್ಯ ಇಲಾಖೆ ಬಲೆಬಿಸಲಾಗಿತ್ತು, ಆದರೆ ಸಾರ್ವಜನಿಕರ ಕೂಗಾಟದಿಂದ ಬಲೆಗೆ ಬೀಳದೆ ತಪ್ಪಿಸಿಕೊಳ್ಳುತ್ತಿದ್ದ ಚಿರತೆಯನ್ನ ರಂಗಾಪುರ ಗ್ರಾಮದ ಆನಂದ್ ಎಂಬ ಯುವಕ ಚಿರತೆ ಬಾಲ ಹಿಡಿದು ಅರಣ್ಯ ಇಲಾಖೆ ಬಲೆಗೆ ಕೆಡವಿದ್ದು, ತಕ್ಷಣ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸಾರ್ವಜನಿಕರು ಚಿರತೆ ಹಿಡಿದ್ದು, ಸುರಕ್ಷಿತ ಸ್ಥಳಕ್ಕೆ ರವಾನಿಸಿದ್ದಾರೆ.
ತುಮಕೂರು ಉಪ ಅರಣ್ಯಸಂರಕ್ಷಣಾಧಿಕಾರಿ ಅನುಪಮ ಮಾರ್ಗದರ್ಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಭರತ್ ಡಿ.ವಲಯ ಅರಣ್ಯಾಧಿಕಾರಿ ಕೆ.ಎಲ್ ಮಧು‌.ಉಪ ಅರಣ್ಯಾಧಿಕಾರಿ ಪ್ರದೀಪ್ ನೇತೃತ್ವದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆ ಹಿಡಿದರು

ವರದಿ:ಮಂಜುನಾಥ್ ಹಾಲ್ಕುರಿಕೆ

Leave a Reply

Your email address will not be published. Required fields are marked *

error: Content is protected !!