ರಾಜ್ಯಸರ್ಕಾರ 9 ವಿಶ್ವವಿದ್ಯಾನಿಲಯ ಮುಚ್ಚುವ ನಿರ್ಧಾರ ಕೈ ಬಿಡಲು ತುಮಕೂರು ವಿವಿ ಮಾಜಿ ಸಿಂಡಿಕೇಟ್ ಸದಸ್ಯ ರಾಜು ಒತ್ತಾಯ.

Spread the love

ತಿಪಟೂರು:ರಾಜ್ಯ ಸರ್ಕಾರವು 9ವಿಶ್ವಾವಿದ್ಯಾನಿಲಯಗಳನ್ನು ಮುಚ್ಚಲು ಸಚಿವ ಸಂಪುಟ ತೀರ್ಮಾನ ತೆಗೆದುಕೂoಡಿರುವುದು ದುರ್ದೈವದಸಂಗತಿಯಾಗಿದೆ.ಸರ್ಕಾರದ ನಿರ್ಧಾರದಿಂದ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ,ಸರ್ಕಾರ ತಮ್ಮ ನಿರ್ಧಾರ ವಾಪಾಸ್ ಪಡೆಯಬೇಕು ಎಂದು ತುಮಕೂರು ವಿಶ್ವವಿದ್ಯಾನಿಲಯ ಮಾಜಿ ಸಿಂಡಿಕೇಟ್ ಸದಸ್ಯ ರಾಜು ರಾಜ್ಯ ಸರ್ಕಾರವನ್ನ ಒತ್ತಾಯಿಸಿದರು.
ರಾಜ್ಯಸರ್ಕಾರ ನೆಡೆಯಿಂದ ಆಯಾ ಜಿಲ್ಲೆಯ ವಿದ್ಯಾರ್ಥಿಗಳಿಗೆ ಮಾಡಿದ ಅನ್ಯಾವಾಗಿದೆ, ಕೇವಲ ಹಣಕಾಸಿನ ದೃಷ್ಟಿಯಿಂದವಿಶ್ವಾವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವುದು ಘನ ಸರ್ಕಾರಕ್ಕೆ ಶೋಭೆ ತರುವಂಥದ್ದಲ್ಲ, ಸರ್ಕಾರಿ ವಿ. ವಿ ಗಳನ್ನು ಬಲಿಷ್ಟಗೊಳಿಸುವ ಕಾಳಜಿ ಮತ್ತು ಇಚ್ಛಾಶಕ್ತಿಯನ್ನು ರಾಜ್ಯ ಸರ್ಕಾರ ಮಾಡಬೇಕು. ರಾಜ್ಯದಲ್ಲಿ ಇತ್ತೀಚೆಗೆಖಾಸಗಿವಿಶ್ವವಿದ್ಯಾನಿಲಯಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಸರ್ಕಾರಿವಿವಿಗಳನ್ನುಮುಚ್ಚುತ್ತಿರುವುದರಿಂದ ರಾಜ್ಯದ ದಲಿತ ಬಡವ ಹಿಂದುಳಿದ ವರ್ಗಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮಾಡುತ್ತಿರುವ ಅನ್ಯಾಯವಾಗಿದೆ ರಾಜ್ಯ ಸರ್ಕಾರ ಉಚಿತಗ್ಯಾರಂಟಿಯೋಜನೆಗಳಿಗಾಗಿ ಸಾವಿರಾರು ಬಜೆಟ್ ನಲ್ಲಿ ಕೊಟ್ಟಿದೆ ಆದರೆ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಹಣವನ್ನು ನೀಡಲಾಗದೆ 9 ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ಹೊರಟಿರುವುದು ಶಿಕ್ಷಣಕ್ಕೆ ಮಾಡಿದ,ಅನ್ಯಾಯವಾಗಿದೆ,ಯಾವ ಶಿಕ್ಷಣ ತಜ್ಞರಾಶಿಫಾರಸಿನ ಮೇಲೆ ವಿವಿ ಮುಚ್ಚಲು ಸಚಿವ ಸಂಪುಟ ತೀರ್ಮಾನಿಸಿದ್ದೀರಿ ಎಂಬುದನ್ನು ರಾಜ್ಯದ ಜನತೆಗೆ ತಿಳಿಸಿ ಕ್ಷಮೆ ಯಾಚಿಸಬೇಕು ಎಂದು ಅಗ್ರಹ ಮಾಡುತ್ತೇನೆ ರಾಜ್ಯದ ಉನ್ನತ ಶಿಕ್ಷಣ ಪರಿಷತ್ ಶಿಫಾರಸು ಮಾಡಿರುವ ಹಣವನ್ನು ರಾಜ್ಯ ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದ ಎಲ್ಲಾ ವಿವಿಗಳಲ್ಲೂ ಈ ಕೂಡಲೇ ಜಾರಿಗೊಳಿಸಬೇಕು ಎಂದು ಆಗ್ರಹ ಪಡಿಸುತ್ತೇನೆ ತುಮಕೂರು ವಿಶ್ವವಿದ್ಯಾನಿಲಯ ಸೇರಿದಂತೆ , ರಾಜ್ಯದ ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ ಬೋಧಕ ಹಾಗೂ ಬೋಧಕೇತರ ಹುದ್ದೆಗಳನ್ನು ಈ ಕೂಡಲೇ ಭರ್ತಿ ಮಾಡಲು ಸೂಚಿಸಬೇಕು ಎಂದು ಒತ್ತಾಯಿಸಿದರು.

ವರದಿ :ಮಂಜುನಾಥ್ ಹಾಲ್ಕುರಿಕೆ

Leave a Reply

Your email address will not be published. Required fields are marked *

error: Content is protected !!