Spread the love

ತಿಪಟೂರು: ತುಮಕೂರು ಬಿಜೆಪಿ ಜಿಲ್ಲಾ ಕಾರ್ಯಕಾರಿಣಿಗೆ ವಿಶೇಷ ಆಹ್ವಾನಿತರಾಗಿ ಮಾಜಿ ಸಚಿವ ಬಿ.ಸಿ. ನಾಗೇಶ್ ಅವರ ಪುತ್ರ ವಿಶ್ವದೀಪ್ ಬಿ.ಸಿ. ನಾಗೇಶ್ ಅವರನ್ನು ನೇಮಕ ಮಾಡಲಾಗಿದೆ.ಇವರೊಂದಿಗೆ ಕುಣಿಗಲ್ ಬಿಜೆಪಿ ಮುಖಂಡ ಡಿ. ಕೃಷ್ಣಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ದಿಶಾ ಸದಸ್ಯ ವೈ. ಹೆಚ್. ಹುಚ್ಚಯ್ಯ, ಆಯರಹಳ್ಳಿ ಶಂಕರಪ್ಪ, ಗುಬ್ಬಿ ಎಸ್.ಡಿ. ದಿಲೀಪ್ ಕುಮಾರ್ ಸೇರಿದಂತೆ ಒಟ್ಟು 27 ಜನರನ್ನು ವಿಶೇಷ ಆಹ್ವಾನಿತರಾಗಿ ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ ಅವರು ಆಯ್ಕೆ ಮಾಡಿದ್ದಾರೆ.

ವರದಿ :ಮಂಜುನಾಥ್ ಹಾಲ್ಕುರಿಕೆ

error: Content is protected !!